KPCC executive president Dinesh Gundu Rao and his wife given a befitting reply to BJP state chief secretory Shobha Karandlaje on her dalit marriage remark.
'ಶೋಭಾ ಕರಂದ್ಲಾಜೆ ಅವರಿಗಿನ್ನೂ ಮದುವೆಯಾಗಿಲ್ಲ. ಮದುವೆಯಾಗಲು ಇನ್ನೂ ಅವಕಾಶವಿದೆ. ಬೇಕಾದರೆ ಅವರು ಮದುವೆಯಾಗಲಿ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಈ ಹಿಂದೆ ಶೋಭಾ ಕರಂದ್ಲಾಜೆ, "ಕೆಪಿಸಿಸಿ ಕಾರ್ಯಾಧ್ಯಕ್ಷರೇನು ದಲಿತರ ಮನೆಯ ಹೆಣ್ಣು ತಂದಿದ್ದಾರೆಯೇ. ಅವರು ಯಾರನ್ನು ಮದುವೆಯಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು," ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್ ಬೇಕಿದ್ದರೆ ಅವರೇ ದಲಿತರನ್ನು ಮದುವೆಯಾಗಲಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.