ಉತ್ತರ ಕನ್ನಡ ಜಿಲ್ಲೆಯ ಪ್ರತಿಭಟನೆ ಬಗ್ಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ

Oneindia Kannada 2017-12-11

Views 218

BJP and Vishwa Hindu Parishad protest by closing highway 66 against govt to quickly arrest Paresh mestha murderers. VHP member Paresh mesta dead body found three days back in Honnavara lake. BJP and VHP accusing that Muslims killed Paresh. Now B S Yeddyurappa reacts about the protest.

ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಅವರ ಹತ್ಯೆಗೈದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ತಡೆದು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಳೆದ ಬುಧವಾರ ಕಾಣೆಯಾಗಿದ್ದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಹೊನ್ನಾವರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಪರೇಶ್ ಮೇಸ್ತ ಕೊಲೆ ವಿಷಯ ಹರಡುತ್ತಿದ್ದಂತೆ ಕಾರವಾರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಚಾಜ್೯ ಪ್ರಕರಣ. ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯೆ. ಸರ್ಕಾರವೇ ಬಿಜೆಪಿಯವರ ಮೇಲೆ ಗುಂಡಾಗಿರಿ‌ ಮಾಡುತ್ತಿದೆ, ಹೋರಾಟಗಳನ್ನ ಹತ್ತಿಕ್ಕೂವ ಕೆಲಸ ಮಾಡುತ್ತಿದೆ. ಶಾಂತಿಯೂತ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಲಾಠಿ ಚಾಜ್೯ ಮಾಡುವಂತಹದ್ದು ಏನಿತ್ತು . ಲಾಠಿ ಚಾಜ್೯ ಖಂಡಿಸಿ ನಾಳೆ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕುಮಟಾದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

Share This Video


Download

  
Report form
RELATED VIDEOS