ವಿಶ್ವ ವನ್ಯಜೀವಿ ದಿನ ಹಿನ್ನೆಲೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೆಲ್ನಲ್ಲಿ ಮೂರು ದಿನಗಳ ಕಾಲ ನಟ ದರ್ಶನ್ ಸೆರೆ ಹಿಡಿದ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ. ದರ್ಶನ್ ಕಾಡಿನಲ್ಲಿ ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನ ಪ್ರದರ್ಶನ ಇಡಲಾಗಿದ್ದು ಇದರಿಂದ ಬಂದ ಹಣವನ್ನ ವನ್ಯಜೀವಿ ಸಂರಕ್ಷಣಾ ನಿಧಿಗೆ ನೀಡಲು ನಿರ್ಧರಿಸಲಾಗಿದೆ.